ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಆಹಾರ ವಾಹಿನಿ(ಆಹಾರ ಕಿಯೋಸ್ಟ್) ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಒಕ್ಕಲಿಗ ಅಥವಾ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು. ಸರ್ಕಾರ ಸದರಿ ಯೋಜನೆಯಡಿ ನಾಲ್ಕು ಚಕ್ರಗಳ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ಒಳಗೊಂಡ ಇವಿ-ಗೂಡ್ಸ್ ವಾಹನಗಳ ಖರೀದಿಗೆ 3 ಲಕ್ಷರೂ.ವರೆಗೆ ಸಹಾಯಧನ ನೀಡುತ್ತಿದೆ. ಸ್ವಂತ ಉದ್ಯೋಗ ಕೈಗೊಳ್ಳಲು ಆಸಕ್ತಿ ಹೊಂದಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ನಿಗದಿತ ಕೊನೆಯ ದಿನಾಂಕದೊಳಗೆ ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು.
ಒಕ್ಕಲಿಕ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮಾರ್ಚ್ 06
ವೀರಶೈವ ಲಿಂಗಾಯತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆ ದಿನ – ಮಾರ್ಚ್ 08
ಆಹಾರವಾಹಿನಿ ಯೋಜನೆಯ ವಿವರ:
ಸರ್ಕಾರವು ಆಹಾರವಾಹಿನಿ (ಆಹಾರ ಕಿಯೋಸ್ಟ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ಒಳಗೊಂಡ ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುತ್ತದೆ ಹಾಗೂ ವಾಹನ ಖರೀದಿಗೆ 3ಲಕ್ಷರೂ. ಸಹಾಯಧನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಉಳಿಕೆ ಮೊತ್ತವನ್ನು ಬ್ಯಾಂಕುಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ.
• ಕನಕಪುರ, ಶಿವಮೊಗ್ಗ ನಗರ, ತುಮಕೂರು ನಗರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಉತ್ತರ, ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ಮಂಡ್ಯ, ಚಾಮರಾಜನಗರ, ಉಡುಪಿ, ಮಂಗಳೂರು ನಗರ ಉತ್ತರ, ಮಂಗಳೂರು ನಗರ ದಕ್ಷಿಣ
• ಹಾಸನ, ಚಿಕ್ಕಮಗಳೂರು, ಮಡಿಕೇರಿ, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬಾಗಲಕೋಟೆ, ಬಿಜಾಪುರ ನಗರ, ಗದಗ, ಹುಬ್ಬಳ್ಳಿ ಧಾ।-ಪೂರ್ವ, ಕಾರವಾರ, ಹಾವೇರಿ, ಗುಲ್ಬರ್ಗಾ ದಕ್ಷಿಣ, ಯಾದಗಿರಿ, ಬಳ್ಳಾರಿ ನಗರ, ಬೀದರ್, ರಾಯಚೂರು, ಕೊಪ್ಪಳ, ವಿಜಯನಗರ
ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಅರ್ಜಿದಾರರ ಮಾನ್ಯವಾದ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಅರ್ಜಿದಾರರ ಪಾಸ್ಪೋರ್ಟ್ ಅಳತೆಯ ಭಾವ ಚಿತ್ರ ಆಧಾರ್ ಕಾರ್ಡ್ ಪ್ರತಿ ಬ್ಯಾಂಕ್ ಪಾಸ್ ಬುಕ್ ಡ್ರೈವಿಂಗ್ ಲೈಸೆನ್ಸ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇತ್ಯಾದಿ…
ಆಯ್ಕೆ ವಿಧಾನ:
ಸದರಿ ಯೋಜನೆಯಡಿ ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ.
ಅರ್ಜಿ ಸಲ್ಲಿಕೆ ಹೇಗೆ ?
ಅಭ್ಯರ್ಥಿಗಳು ನಿಮ್ಮ ಹತ್ತಿರದ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು.
• ಸೇವಾ ಸಿಂಧು ಅಧಿಕೃತ ಜಾಲತಾಣ https://sevasindhuservices.karnataka.gov.in/ ಕ್ಕೆ ಭೇಟಿ ನೀಡಿ.
• ಅರ್ಜಿದಾರರ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ಮೂಲಕ ಕಳುಹಿಸಲಾಗುವ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಭಾವಚಿತ್ರ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ನಂತರ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ: ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ದೂರವಾಣಿ ಸಂಖ್ಯೆ 080-29904350, 29904268 ಅನ್ನು ಅಥವಾ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ದೂರವಾಣಿ ಸಂಖ್ಯೆ 080-22865522ಗೆ ಸಂಪರ್ಕಿಸಬಹುದು.
Reservation cost people not provide food truck