ಆಯುಷ್ ಇಲಾಖೆಯಲ್ಲಿ ಲೆಕ್ಕ ವ್ಯವಸ್ಥಾಪಕರ ಹುದ್ದೆಗೆ ನೇಮಕಾತಿ, ಆ.12ಕ್ಕೆ ಸಂದರ್ಶನ

Published on:

ಫಾಲೋ ಮಾಡಿ
Ayush Department Bangalore Recruitment 2025
Ayush Department Bangalore Recruitment 2025

ಆಯುಷ್ ಇಲಾಖೆಯು ಖಾಲಿ ಇರುವ ಲೆಕ್ಕ ವ್ಯವಸ್ಥಾಪಕರ ಹುದ್ದೆಯನ್ನು ನೇಮಕಾತಿಗಾಗಿ ನೇರ ಸಂದರ್ಶನಕ್ಕಾಗಿ ಅಧಿಸೂಚನೆಯನ್ನು ಹೊರಡಿಸಿದೆ.

ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ-ಖಾಲಿಯಿರುವ ಲೆಕ್ಕ ವ್ಯವಸ್ಥಾಪಕರ ಹುದ್ದೆಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗುವ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬೆಂಗಳೂರು ಆಯುಷ್​ ಇಲಾಖೆಯ ಆಯುಕ್ತ ವಿಪಿನ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೇಮಕಾತಿಯ ಪ್ರಮುಖ ದಿನಾಂಕಗಳು:

  • ನೇಮಕಾತಿಯ ಪ್ರಕಟಣೆಯ ದಿನಾಂಕ – ಜುಲೈ 30, 2025
  • ನೇರ ಸಂದರ್ಶನ ನಡೆಯುವ ದಿನಾಂಕ – ಆಗಸ್ಟ್ 12, 2025

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ MBA-ಹಣಕಾಸು/M.Com/ICWA (ಇಂಟರ್)/CA(ಇಂಟರ್) ಪೂರ್ಣಗೊಳಿಸಿರಬೇಕು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment