ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Published on:

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಮೆಟ್ರಿಕ್‌ ನಂತರದ ಕೋರ್ಸ್‌ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ ಹಾಗೂ ಅಲೆಮಾರಿ/ಅರೆಅಲೆಮಾರಿ ಜನಾಂಗದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ(ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯ ಸಮುದಾಯದ ಅಭ್ಯರ್ಥಿಗಳಿಗೆ ಲಭ್ಯವಿದೆ. ಅರ್ಹರು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಜಾಲತಾಣhttps://ssp.postmatric.karnataka.gov.in/ಕ್ಕೆ ಭೇಟಿ ನೀಡಿ, ಆ.31ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ 8050770004/8050770005 ಅಥವಾ ಇ-ಮೇಲ್ ವಿಳಾಸ bcwdhelpline@gmail.comಕ್ಕೆ ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆ ತಲೆದೋರಿದಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಇ-ಮೇಲ್ ವಿಳಾಸ postmatrichelp@karnataka.gov.in ಅಥವಾ ಸಹಾಯವಾಣಿ ಸಂಖ್ಯೆ 1902ಗೆ ಸಂಪರ್ಕಿಸಬಹುದು ಎಂದು ಕೋರಲಾಗಿದೆ.

BCM SSP Post Matric Scholarship 2026-27 Apply LinkApply Now
Official Websitebcwd.karnataka.gov.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

45 thoughts on “ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ”

Leave a Comment