ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ(Free UPSC/Banking Exams Training-Coaching 2025)ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
• ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – 26-05-2025
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 15-06-2025
ವಿದ್ಯಾರ್ಹತೆ:
ಆಸಕ್ತ ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.
ವಯೋಮಿತಿ:
ದಿನಾಂಕ 15.06.2025 ರಂತೆ ಯು.ಪಿ.ಎಸ್.ಸಿ ನಾಗರಿಕ ಸೇವೆ ಪರೀಕ್ಷಾ ತರಬೇತಿಗೆ
- ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 31 ವರ್ಷಗಳು
ಬ್ಯಾಂಕಿಂಗ್ ಪಿ.ಓ ಪರೀಕ್ಷಾ ತರಬೇತಿಗೆ:
- ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 27 ವರ್ಷಗಳು
ಅಭರ್ಥಿಗಳು ಯು.ಪಿ.ಎಸ್.ಸಿ ನಾಗರಿಕ ಸೇವೆ, ಬ್ಯಾಂಕಿಂಗ್ ಪಿ.ಒ ಅಥವಾ ಎರಡೂ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಳಿಗೆ ಅವರ ವಯೋಮಿತಿ ಆಧಾರದ ಮೇಲೆ ಅರ್ಜಿಯಲ್ಲಿ ಆಸಕ್ತಿ ನಮೂದಿಸಬಹುದಾಗಿದ್ದು, ಅದರಂತೆಯೇ ಅಭ್ಯರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಬರೆಯಲು ಅರ್ಹರಿರುತ್ತಾರೆ.
ತರಬೇತಿ ಅವಧಿ ವಿವರ:
ಪರೀಕ್ಷಾ ಪೂರ್ವ ತರಬೇತಿ ಹೆಸರು | ತರಬೇತಿ ಅವಧಿ |
ಯು.ಪಿ.ಎಸ್.ಸಿ ನಾಗರಿಕ ಸೇವೆ | 7-9 ತಿಂಗಳು |
ಬ್ಯಾಂಕಿಂಗ್ ಪಿ.ಒ | ಕನಿಷ್ಠ 3 ತಿಂಗಳುಗಳು |
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
- ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ) ಅಥವಾ 3(ಬಿ) ಗಳಿಗೆ ಸೇರಿರಬೇಕು.
- ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ – ಪ್ರವರ್ಗ1, ಪ್ರವರ್ಗ2(ಎ), 3(ಎ) ಮತ್ತು 3(ಬಿ) ಗಳಿಗೆ 5 ಲಕ್ಷ ರೂ.
- ಕೇಂದ್ರ/ರಾಜ್ಯ ಸರ್ಕಾರದ/ಅನುದಾನಿತ ಸಂಸ್ಥೆಗಳ/ಸಾರ್ವಜನಿಕ ಸ್ವಾಮತೆಗೆ ಒಳಪಟ್ಟ ಸಂಸ್ಥೆಗಳಲ್ಲಿನ ನೌಕರರು ಸದರಿ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಮತ್ತು ತರಬೇತಿ ಪಡೆಯಲು ಅರ್ಹರಿರುವುದಿಲ್ಲ.
- ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿ ಪಡೆದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಲು ಮತ್ತು ತರಬೇತಿ ಪಡೆಯಲು ಅರ್ಹರಿರುವುದಿಲ್ಲ.
ಆಯ್ಕೆ ವಿಧಾನ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳು, ಮೀಸಲಾತಿ(ಪ್ರವರ್ಗವಾರು, ವಿಶೇಷಚೇತನ ಮತ್ತು ಮಹಿಳೆ), ವಿವಿಧ ಸಂಸ್ಥೆಗಳಿಗೆ ನಿಗದಿಪಡಿಸುವ ಸ್ಥಾನಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ವಯ ಅಭರ್ಥಿಗಳನ್ನು ಅವರ ಮೂಲ ದಾಖಲೆಗಳ ಪರಿಶೀಲನೆ ಮಾಡಿದ ನಂತರ ತರಬೇತಿಗಾಗಿ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿ ನಿಯೋಜಿಸಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕೃತ ವೆಬ್ಸೈಟ್ https://bcwd.karnataka.gov.in/ ಅಥವಾ ಸೇವಾ ಸಿಂಧು ಪೋರ್ಟಲ್ sevasindhuservices.karnataka.go.in ಗೆ ಭೇಟಿ ನೀಡಿ.
- ಅರ್ಜಿಯಲ್ಲಿ ಕೇಳಲಾಗುವ ಸ್ವಭಾವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಅರ್ಜಿಯನ್ನು ಒಮ್ಮೆ ಮಾತ್ರ ಸಲ್ಲಿಸಲು ಅವಕಾಶವಿದ್ದು, ಅರ್ಜಿಯನ್ನು ಸಲ್ಲಿಸಿದ ನಂತರ. edit ಅಥವಾ delete option ಗೆ ಅವಕಾಶವಿರುವುದಿಲ್ಲ.
- ಆದ್ದರಿಂದ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ
ಸಹಾಯ ವಾಣಿ – 8050770006 ಅನ್ನು ಸಂಪರ್ಕಿಸಬಹುದು.
Important Direct Links:
BCWD Free UPSC Banking Coaching Application 2025 | Apply Now |
Official Website | bcwd.karnataka.gov.in |
More Updates | Karnataka Help.in |