ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ, ನೇರ ಸಂದರ್ಶನದ ಮೂಲಕ ಆಯ್ಕೆ

ವಿದ್ಯಾರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಇತರೆ ಪ್ರಮುಖ ಮಾಹಿತಿ ಇಲ್ಲಿದೆ

By Shwetha Chidambar

Published On:

IST

ಫಾಲೋ ಮಾಡಿ

DHFWS Bagalkot Recruitment 2025
DHFWS Bagalkot Recruitment 2025

ಕರ್ನಾಟಕ ಬ್ರೈನ್ ಹೆಲ್ತ್ ಇನಿಶಿಯೇಟಿವ್ (kaBHI) ಕಾರ್ಯಕ್ರಮದಡಿಯಲ್ಲಿ ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 06 ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 06 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸುವ ದಿನಾಂಕ- ಜೂನ್ 26,2025

ಖಾಲಿ ಇರುವ ಹುದ್ದೆಗಳ ವಿವರ:

  • ನ್ಯುರೋಲಜಿಸ್ಟ್ – 1 ಹುದ್ದೆ
  • ನರ್ಸ್ – 1 ಹುದ್ದೆ
  • ಫಿಸಿಯೋಥೆರಪಿಸ್ಟ್ – 1 ಹುದ್ದೆ
  • ಸ್ಪೀಚ್ ಥೆರಪಿಸ್ಟ್ – 1 ಹುದ್ದೆ
  • ಕ್ಲಿನಿಕಲ್ ಸೈಕಾಲಜಿಸ್ಟ್ – 1 ಹುದ್ದೆ
  • ಡಿಸ್ಟ್ರಿಕ್ಟ್ ಕೋರ್ಡಿನೇಟರ್ – 1 ಹುದ್ದೆ

ಶೈಕ್ಷಣಿಕ ಅರ್ಹತೆ:

ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹಾಗೂ ವೃತ್ತಿ ಅನುಭವವನ್ನು ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.

  • BSC, MMH, BPT, MBBS in related discipline.

ವಿಶೇಷ ಸೂಚನೆ:

  • ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ಮಾತನಾಡಲು ಬರಬೇಕು.

ವಯೋಮಿತಿ:

ಗರಿಷ್ಠ ವಯಸ್ಸಿನ ಮಿತಿ – 45 ರಿಂದ 60 ವರ್ಷಗಳು

ಆಯ್ಕೆ ವಿಧಾನ:

ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ

ಅರ್ಜಿ ಸಲ್ಲಿಸುವ ವಿಧಾನ:

ಜೂನ್ 26, 205 ರಂದು ಬೆಳಿಗ್ಗೆ 10.30 ರಿಂದ ಸಂಜೆ 5:00 ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಅರ್ಜಿಗಳನ್ನು ಪಡೆದು, ಅಭ್ಯರ್ಥಿಗಳು ಮೂಲ ಶೈಕ್ಷಣಿಕ ದಾಖಲಾತಿಗಳು, 1 ಜೊತೆ ಜೆರಾಕ್ಸ್ ಪ್ರತಿ ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಅರ್ಜಿ ಸಲ್ಲಿಸಿ. ನಿಗದಿಪಡಿಸಿದ ದಿನಾಂಕದಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು.

Important Direct Links:

Official Notification PDFDownload
Official Websitebagalkot.nic.in
More UpdatesKarnataka Help.in

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

For Feedback - admin@karnatakahelp.in

Leave a Comment