2025-26ನೇ ಸಾಲಿಗೆ ಮೈಸೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಗಳ (ವರ್ಗ-1, 2ಎ, 3ಎ ಮತ್ತು 3ಬಿ) ಗೆ ಸೇರಿದ ಕಾನೂನು ಪದವೀಧರ ಅಭ್ಯರ್ಥಿಗಳಿಗೆ 4 ವರ್ಷಗಳ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು, ಅರ್ಹತೆ ಹಾಗೂ ಇತರೆ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – 02-07-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31-07-2025
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ:
- ಅಭ್ಯರ್ಥಿಗಳು ಹಿಂದುಳಿದ ವರ್ಗಗಗಳಾದ ವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆ:
- ಅಭ್ಯರ್ಥಿಯು ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ (31-07-2025) ಹಿಂದೆ ಎರಡು ವರ್ಷಗಳೊಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಾನೂನು ಪದವಿ ಪರೀಕ್ಷೆಯಲ್ಲಿ ಉತೀರ್ಣರಾಗಿರಬೇಕು.
- ಬಾರ್ ಕೌನ್ಸಿಲ್ನಲ್ಲಿ ಹೆಸರನ್ನು ನೋಂದಣಿ ಮಾಡಿಸಿರಬೇಕು.
ವಯೋಮಿತಿ:
- ಉಲ್ಲೇಖಿಸಲಾಗಿರುವುದಿಲ್ಲ
ಅರ್ಜಿ ಶುಲ್ಕ:
• ಉಲ್ಲೇಖಿಸಲಗಿರುವುದಿಲ್ಲ
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಟ್ಟದ ಕಛೇರಿಗಳ ಸಂಕೀರ್ಣ ಕಟ್ಟಡ, ಕೊಠಡಿ ಸಂಖ್ಯೆ:202, 2ನೇ ಮಹಡಿ, ಸಿದ್ದಾರ್ಥನಗರ, ಮೈಸೂರು ಈ ವಿಳಾಸದಲ್ಲಿ ಅರ್ಜಿ ನಮುನೆ ಪಡೆದು.
- ನಿಗದಿತ ನಮೂನೆಯಲ್ಲಿ ಕೇಳಲಾಗಿರುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಲಗತ್ತಿಸಿ.
- ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ದಾಖಲಾತಿಗಳೊಂದಿಗೆ ಜುಲೈ 31 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಳಿಗೆ
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೂ.ಸಂಖ್ಯೆ – 0821-2342917ಗೆ ಸಂಪರ್ಕಿಸಬಹುದು.