UPSC/IAS ಆಕಾಂಕ್ಷೆಗಳಿಗೆ ಗುಡ್ ನ್ಯೂಸ್!, ಪರೀಕ್ಷಾ ಪೂರ್ವ ತರಬೇತಿಗಾಗಿ ಈ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

By Shwetha Chidambar

Published On:

IST

ಫಾಲೋ ಮಾಡಿ

Free UPSC IAS Exam Pre-Training 2025
Free UPSC IAS Exam Pre-Training 2025

Free UPSC IAS Exam Pre-Training 2025: ಯುಪಿಎಸ್ಸ್ಸಿ/ಐಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ನೀಡಲು ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ಸ್ವರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://dom.karnataka.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಲೇಖನದಲ್ಲಿ ಸದರಿ ತರಬೇತಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ,ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 21-06-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 30-06-2025

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ:

  • ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಅಭ್ಯರ್ಥಿಯು ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ)
    ಸಮುದಾಯಕ್ಕೆ ಸೇರಿದವರಾಗಿರಬೇಕು.
  • ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ 8 ಲಕ್ಷರೂ. ಮೀರಿರಬಾರದು.
  • ಅಭ್ಯರ್ಥಿಯು ಕಳೆದ 3 ವರ್ಷಗಳಲ್ಲಿ ಕನಿಷ್ಠ ಒಂದು ಬಾರಿಯಾದರು UPSC/IAS ಸ್ವರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗೆ ಹಾಜರಾಗಿರಬೇಕು.
  • ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.

ಶೈಕ್ಷಣಿಕ ಅರ್ಹತೆ:

  • ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

  • ದಿನಾಂಕ 30-06-2025 ರಂತೆ ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು
    • ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು

ಅರ್ಜಿ ಸಲ್ಲಿಸುವ ವಿಧಾನ:

  • ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/ ಗೆ ಭೇಟಿ ನೀಡಿ.
  • UPSC/IAS ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ 2025 ಅರ್ಜಿ ಹುಡುಕಿ.
  • ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ನಮೂದಿಸಿ.
  • ಅರ್ಜಿಯನ್ನು ಪರಿಶೀಲಿಸಿ ಮತ್ತೊಮ್ಮೆ ಸಲ್ಲಿಸಿ.
  • ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಹೆಚ್ಚಿನ ಮಾಹಿತಿಗಾಗಿ:

  • ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ 8277799990 ಇವರನ್ನು ಸಂಪರ್ಕಿಸಬಹುದು.

ಇತರೆ ಹೆಚ್ಚಿನ ಮಾಹಿತಿಗಾಗಿ KarnatakaHelp.in ಭೇಟಿ ನೀಡಿ

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

For Feedback - admin@karnatakahelp.in

Leave a Comment