ವಾರದಲ್ಲಿ ಆರು ದಿನವೂ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣನ್ನು ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ.
ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಪ್ರಸ್ತುತ ಯೋಜನೆಯನ್ನು 2025-26ನೇ ಸಾಲಿನಲ್ಲಿ ಮುಂದುವರಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಆದೇಶವನ್ನು ಹೊರಡಿಸಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ಕನ್ನಡದಲ್ಲಿ ನೀಡಲಾಗಿದೆ ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ
ವಾರದ ಆರು ದಿನವೂ ಮೊಟ್ಟೆ/ಬಾಳೆಹಣ್ಣು ವಿತರಣೆ
2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರ ಘೋಷಣೆಯಂತೆ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ.
ಹಾಜರಾದ ಎಲ್ಲಾ ಮಕ್ಕಳ ಹಾಜರಾತಿ ಮಾಹಿತಿ SATS ನಲ್ಲಿ ನಮೂದಿ
ಶಾಲಾ ಮುಖ್ಯ ಶಿಕ್ಷಕರು, ಪ್ರತಿ ದಿನ ಪೂರ್ವಾಹ್ನ 11 ಗಂಟೆಯೊಳಗಾಗಿ ಶಾಲೆಗೆ ಹಾಜರಾದ ಎಲ್ಲಾ ಮಕ್ಕಳ ಹಾಜರಾತಿ ಮಾಹಿತಿಯನ್ನು ಪಡೆದು SATS ತಂತ್ರಾಂಶದಲ್ಲಿ ನಮೂದಿಸಿ, ಸದರಿ ಹಾಜರಾತಿ ಮಾಹಿತಿಯನ್ನು ಶಾಲಾ ಮುಖ್ಯ ಶಿಕ್ಷಕರು OTP ಮೂಲಕ ಇ-ಸಹಿ ಯೊಂದಿಗೆ ದೃಢೀಕರಿಸುವ ವ್ಯವಸ್ಥೆಯನ್ನು SATS ತಂತ್ರಾಂಶದಲ್ಲಿ ಆಯುಕ್ತರು, ಶಿಕ್ಷಣ ಇಲಾಖೆ ಇವರು ಈ ವಾರದಲ್ಲಿಯೇ ಕಲ್ಪಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.
ವಿದ್ಯಾರ್ಥಿಗಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣಿನ ಪೋಷಕಾಂಶಗಳ ಅರಿವು
ಪ್ರತಿ ದಿನ ಬೆಳಗಿನ ಪ್ರಾರ್ಥನೆಯ ವೇಳೆ ಹತ್ತು ನಿಮಿಷ ಶಾಲೆಗಳ ಮುಖ್ಯಶಿಕ್ಷಕರು ಮೊಟ್ಟೆ ಹಾಗೂ ಬಾಳೆಹಣ್ಣಿನಲ್ಲಿನ ಪೋಷಕಾಂಶಗಳ ಬಗ್ಗೆ ಹಾಗೂ ಪ್ರಯೋಜನೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿ ಅರಿವು ಮೂಡಿಸಲಾಗುತ್ತದೆ.
ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕಾಂಶ ಲಭ್ಯ
ಪೂರಕ ಪೌಷ್ಟಿಕಾಂಶದ ರೂಪದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗುವ ಮೊಟ್ಟೆಯು ಉತ್ತಮಗುಣಮಟ್ಟವುಳ್ಳದಾಗಿದ್ದು, ಕನಿಷ್ಠ 50g ತೂಕವನ್ನು ಹೊಂದಿರುತ್ತದೆ ಹಾಗೂ ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಪ್ರತಿ ದಿನ 2 ಉತ್ತಮವಾದ ಬಾಳೆಹಣ್ಣನ್ನು ವಿತರಿಸಲಾಗುತ್ತದೆ.
ಪೋಷಕರಿಗೂ ಬಿಸಿಯೂಟದ ಭಾಗ್ಯ
ಪ್ರತಿ ವಾರ ಕನಿಷ್ಠ ಹತ್ತು ಪೋಷಕರನ್ನು ಯಾದೃಚ್ಛಿಕೀಕರಣದ (Randomisation) ಮೂಲಕ ಶಾಲಾ ಮುಖ್ಯಸ್ಥರು ಶಾಲಾ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟವನ್ನು ಸೇವಿಸಲು ಆಹ್ವಾನಿಸಬೇಕು. ಶಾಲಾ ಶಿಕ್ಷಣ ಆಯುಕ್ತರು ಇದನ್ನು ತಕ್ಷಣವೇ ಜಾರಿಗೆ ತರುವಂತೆ ಆದೇಶ ಹೊರಡಿಸಲಾಗಿದೆ.
ಮಕ್ಕಳ ದಿನಾಚರಣೆ ದಿನದಂದು ಶಾಲೆಯಲ್ಲಿನ ಎಲ್ಲಾ ಮಕ್ಕಳ ಪೋಷಕರನ್ನು ಮಧ್ಯಾಹ್ನದ ಊಟಕ್ಕೆ ಆಹ್ವಾನಿಸಿ ಬೇಕು ಹಾಗೂ ಮಕ್ಕಳ ಪೋಷಕರ ಸಮ್ಮುಖದಲ್ಲಿ ಶಾಲಾ ಲೆಕ್ಕಪತ್ರಗಳ ವಿವರಗಳನ್ನು ಶಾಲಾ ಮುಖ್ಯಸ್ಥರು ಶಿಕ್ಷಕರು ಓದಿ ಸಲ್ಲಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮತ್ತಷ್ಟು ಮಾಹಿತಿಗಾಗಿ KarnatakaHelp.inಗೆ ಭೇಟಿ ನೀಡಿ