Karnataka Maratha Abhivrudhi Nigam Loan Scheme 2024: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ” ದಿಂದ ನೀಡುವ ವಿವಿಧ ಯೋಜನೆಗಳ (Karnataka Maratha Communities Development Corporation) ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ.
ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಫಲಾನುಭವಿಗಳು ಈ ಲೇಖನವನ್ನು ಸಂಪೂರ್ಣವಾಗಿ ಓದಿ, ಜೊತೆಗೆ ನಿಮ್ಮ ಹಿತೈಶಿಗಳಿಗೂ ತಪ್ಪದೇ ಶೇರ್ ಮಾಡಿ.
2024-25ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
☞ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ) ☞ ಜೀಜಾವು-ಜಲಭಾಗ್ಯ ಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ) ☞ ಶೈಕ್ಷಣಿಕ ಸಾಲ ಯೋಜನೆಗಳು ☞ ಮರಾಠ ಮಿಲ್ಟಿ ಹೋಟೆಲ್ ಯೋಜನೆ ☞ ಸ್ವಯಂ ಉದ್ಯೋಗ ಸಾಲ ಯೋಜನೆ ☞ ಸ್ವಾವಲಂಬಿ ಸಾರಥಿ ಯೋಜನೆ. ☞ ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆ
ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ):
ಘಟಕ ವೆಚ್ಚ ರೂ. 1ಲಕ್ಷ / ರೂ. 2ಲಕ್ಷ
ಸಹಾಯ ಧನ ರೂ. 20,000/-/ರೂ. 30,000/-
ಸಾಲ ಮೊತ್ತ ರೂ. 80,000/- / ರೂ. 1,70,000/-
ಜೀಜಾವು-ಜಲಭಾಗ್ಯ ಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ):
ಘಟಕ ವೆಚ್ಚ ರೂ. 4.75ಲಕ್ಷ / ರೂ. 3.75ಲಕ್ಷ
ಸಹಾಯ ಧನ ರೂ. 4.25ಲಕ್ಷ / ರೂ. 3.25ಲಕ್ಷ
ಸಾಲ ಮೊತ್ತ ರೂ. 50,000/- / ರೂ. 75,000/-
ಬಡ್ಡಿ ದರ ಶೇ . 4%
ಶೈಕ್ಷಣಿಕ ಸಾಲ ಯೋಜನೆಗಳು ಹೊಸ ವಿದ್ಯಾರ್ಥಿಗಳಿಗೆ(Fresh Students):
ವಾರ್ಷಿಕ ಗರಿಷ್ಟ ರೂ. 1ಲಕ್ಷ
ವಾರ್ಷಿಕ ಬಡ್ಡಿ ಶೇ. 2ರಷ್ಟು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ / ನೀಟ್ ಪರೀಕ್ಷೆ ಮೂಲಕ ಪ್ರವೇಶಾತಿ ಪಡೆದಿರಬೇಕು
ಅರಿವು ಶೈಕ್ಷಣಿಕ ಸಾಲ ಯೋಜನೆ(Arivu education loan)ಯ (Renewal):
2022-23 ಹಾಗೂ 2023-24 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿಗೆ 2 ಹಾಗೂ 3 ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು 2 ಮತ್ತು 3 ನೇ ವರ್ಷದ ವ್ಯಾಸಂಗ ದೃಢೀಕರಣ ಮತ್ತು ಕಳೆದ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.
ಮರಾಠ ಮಿಲ್ಟಿ ಹೋಟೆಲ್ ಯೋಜನೆ:
ಘಟಕ ವೆಚ್ಚ& ಸಾಲ ಮೊತ್ತ ರೂ. 5.00 ಲಕ್ಷ
ಸಹಾಯ ಧನ ರೂ. 40,000/-
ವಾರ್ಷಿಕ ಬಡ್ಡಿ ಶೇ. 4ರಷ್ಟು
ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ):
ಘಟಕ ವೆಚ್ಚ : ಶೇ 20ರಷ್ಟು /ಗರಿಷ್ಟ ರೂ. 1ಲಕ್ಷ ಸಹಾಯಧನ,
ಉಳಿಕೆ ಮೊತ್ತ ಬ್ಯಾಂಕ್ ಪಾಲಿನ ಸಾಲ.
ಸ್ವಾವಲಂಬಿ ಸಾರಥಿ ಯೋಜನೆ:
ಘಟಕ ವೆಚ್ಚ ಶೇ.50 ರಷ್ಟು /ಗರಿಷ್ಟ ರೂ. 3ಲಕ್ಷಗಳ ಸಹಾಯಧನ.
ನಾಲ್ಕು ಚಕ್ರಗಳ ವಾಹನ ಖರೀದಿಸಲು (ಹಳದಿ ಬೋರ್ಡ್)
ವಯೋಮಿತಿ 21 ರಿಂದ 45 ವರ್ಷದೊಳಗಿರಬೇಕು.
ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆ:
ಮರಾಠ ಸಮುದಾಯದ ಯುವಜನತೆಯನ್ನು ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗಮುಖಿಗಳನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ITIs, GTTCs, KGTTIS ಇತ್ಯಾದಿಗಳಲ್ಲಿ ಅಲ್ಪಾವಧಿ ಕೋರ್ಸುಗಳ ಮೂಲಕ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾಂಶದ (www.kaushalkar.com) ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
Last Date Of Karnataka Maratha Abhivrudhi Nigama online Application 2024-25
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Last Date: August 31, 2024
ನಿಗಮದ ಸಹಾಯವಾಣಿ (Helpline) ಸಂಖ್ಯೆ 8867537799 ಮತ್ತು 080-29903994ಗೆ ಕಛೇರಿ ಸಮಯದಲ್ಲಿ ಬೆಳಗ್ಗೆ 10:00 ರಿಂದ ಸಂಜೆ 5:30ರವರೆಗೆ ಸಂಪರ್ಕಿಸಬಹುದಾಗಿದೆ.
ಗಮನಿಸಿ: ಅರ್ಹ ಫಲಾಪೇಕ್ಷಿಗಳು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಹತ್ತಿರದ ಗ್ರಾಮ-ಒನ್, ಕರ್ನಾಟಕ-ಒನ್ ಹಾಗೂ ಬೆಂಗಳೂರು-ಒನ್ ನಾಗರಿಕ ಕೇಂದ್ರಗಳಿಗೆ ಭೇಟಿ ನೀಡಿ ಈ ಕೆಳಗಿನ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸತಕ್ಕದು.
ಗಮನಿಸಿ: ಅರ್ಹ ಫಲಾಪೇಕ್ಷಿಗಳು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಹತ್ತಿರದ ಗ್ರಾಮ-ಒನ್, ಕರ್ನಾಟಕ-ಒನ್ ಹಾಗೂ ಬೆಂಗಳೂರು-ಒನ್ ನಾಗರಿಕ ಕೇಂದ್ರಗಳಿಗೆ ಭೇಟಿ ನೀಡಿ ಈ ಕೆಳಗಿನ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸತಕ್ಕದು.
ಅಂತಿಮ ನುಡಿ: ಈ ಮಾಹಿತಿ ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸಿದ್ದೇವೆ. ಇದೆ ರೀತಿ ಹೆಚ್ಚಿನ ಮಾಹಿತಿಗಾಗಿ ನಮ್ಮ ಅಧಿಕೃತ ಟೆಲಿಗ್ರಾಂ ಚಾನೆಲ್ ಅಥವಾ ವಾಟ್ಸಾಪ್ಪ್ ಗ್ರೂಪ್ ಗೆ ಜಾಯಿನ್ ಆಗಿರಿ.
Important Direct Links
Maratha Abhivrudhi Nigam Loan Scheme 2024-25 Notice PDF
Plz sent Bagalkot list