ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘವು ಯುವ ವೃತ್ತಿಪರರ(IFC- ಆಂಕರ್/ಯುವ ವೃತ್ತಿಪರ) ಹುದ್ದೆಗಳ ಭರ್ತಿಗಾಗಿ ನ.16ರಂದು ನಡೆಸಿದ್ದ ಲಿಖಿತ ಪರೀಕ್ಷೆಯಲ್ಲಿ ದಾಖಲಾತಿ ಪರಿಶೀಲನೆಗೆ ಅರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಡಿ.23 ಮತ್ತು 24ರಂದು ಬೆಳಗ್ಗೆ 11ರಿಂದ ಸಂಜೆ 5 ಗಂಟೆವರೆಗೆ ನಂ.4, 3ನೇ ಮಹಡಿ, ಮೈಶುಗರ್ ಕಟ್ಟಡ, ರವೀಂದ್ರ ಕಲಾಕ್ಷೇತ್ರ ಎದುರು, ಜೆ.ಸಿ. ರಸ್ತೆ, ಬೆಂಗಳೂರು-560002ನಲ್ಲಿ ನಡೆಯಲಿರುವ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗಲು ತಿಳಿಸಲಾಗಿದೆ. ಮೂಲ ದಾಖಲಾತಿಗಳ ಪರಿಶೀಲನೆಯಲ್ಲಿ ಅರ್ಹತೆ ಹೊಂದುವ ಅಭ್ಯರ್ಥಿಗಳಿಗೆ ಸದರಿ ಲಿಖಿತ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರ ಮತ್ತು ಸರ್ಕಾರದ ಮೀಸಲಾತಿ ನಿಯಮಗಳನ್ವಯ ಸ್ಥಳ ನಿಯುಕ್ತಿಗಾಗಿ ಕೌನ್ಸಲಿಂಗ್ಗೆ ಹಾಜರಾಗಬೇಕು ಎಂದು ಸಂಜೀವಿನಿ-ಕೆಎಸ್ಆರ್ಎಲ್ಎಸ್ ಅಭಿಯಾನ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Applye trom form
No worry