ಮೈಸೂರು: ಆಹಾರ ನಾಗರಿಕ ಸರಬರಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ವತಿಯಿಂದ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮೈಸೂರು ನಗರದ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕ(ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯಲ್ಲಿನ ನಜರ್ ಬಾದ್/ಲಷ್ಕರ್ ಮೊಹಲ್ಲಾ ವ್ಯಾಪ್ತಿಯ ಸಿ ಬ್ಲಾಕ್ ಗೌಸಿಯಾ ನಗರದಲ್ಲಿ ಪ್ರಸ್ತುತ ನೂತನವಾಗಿ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಸಂಘ ಸಂಸ್ಥೆಗಳಿಂದ ಅರ್ಜಿಯನ್ನು ಸ್ವೀಕಾರ ಪ್ರಾರಂಭಿಸಲಾಗಿದ್ದು, ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಹ ಮತ್ತು ಆಸಕ್ತ ಸಂಘ ಸಂಸ್ಥೆಗಳ ಅಭ್ಯರ್ಥಿಗಳು ಅ.29 ರೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹೊಸ ನ್ಯಾಯಬೆಲೆ ಅಂಗಡಿಯನ್ನು ಪ್ರಾರಂಭಿಸಲು ಅರ್ಹ ನೊಂದಾಯಿತ ವಿವಿದೋದ್ದೇಶ ಸಹಕಾರ ಸಂಘಗಳು, ಪ್ರಾಥಮಿಕ ಕೃಷಿ ಸಹಕಾರ ಸಂಘಗಳು, ಮಹಿಳಾ ಸ್ವ ಸಹಾಯ ಸಂಘಗಳು, ಪ್ರಾಥಮಿಕ ಕೃಷಿ ಸಹಕಾರ ಸಂಘಗಳು, ವಿಕಲಚೇತನರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೂ, ಆದಿವಾಸಿ ವಿವಿದ್ದೋದ್ದೇಶ ಸಹಕಾರ ಸಂಘಗಳು (ಇತರ ನೊಂದಾಯಿತ ಸಹಕಾರ ಸಂಘಗಳು) ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಉಲ್ಲೇಖಿಸಲಾಗಿರುವುದಿಲ್ಲ
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
ಅರ್ಜಿ ಸಲ್ಲಿಸಲು ಇಚ್ಚಿಸುವ ನೋಂದಾಯಿತ ಸಂಘ ಸಂಸ್ಥೆಗಳ ಅಭ್ಯರ್ಥಿಗಳು “ಜಂಟಿ ನಿರ್ದೇಶಕರ ಕಚೇರಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕೊಠಡಿ ಸಂಖ್ಯೆ: 226, 2ನೇ ಮಹಡಿ, ಜಿಲ್ಲಾ ಮಟ್ಟದ ಕಚೇರಿಗಳ ಸಂಕೀರ್ಣ, ಸಿದ್ಧಾರ್ಥನಗರ, ಮೈಸೂರು: 570011 ಈ ವಿಳಾಸದಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು.
ಅರ್ಜಿಯಲ್ಲಿ ಕೇಳಲಾಗುವ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ಲಗತ್ತಿಸಿ. ಅಕ್ಟೋಬರ್ 29ರ ಸಂಜೆ 5.30 ರೊಳಗೆ (ಸದರಿ ದಿನವು ಸರ್ಕಾರಿ ರಜಾ ದಿನವಾದಲ್ಲಿ) ನಂತರದ ಕಚೇರಿ ಕರ್ತವ್ಯದ ದಿನದ ಸಂಜೆ 5.30 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: ಮೈಸೂರು ಜಿಲ್ಲೆ ಆಹಾರ ನಾಗರಿಕ ಸರಬರಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.
10th paas
Pass
degree pass i want job required nyaya bele angadi shop
ರೆಡಿ ಫಾರ್ ಆಟೋಮೊಬೈಲ್ ಮಾಡುತ್ತಿದ್ದೇವೆ ಅರ್ಜಿ ಹಾಕುತ್ತಿದ್ದೇವೆ ಧನ್ಯವಾದಗಳು