KARTET 2025ರ ಹಾಲ್‌ ಟಿಕೆಟ್‌ ಬಿಡುಗಡೆ

2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಡಿ.1 ರಿಂದ ಡೌನ್ಲೋಡ್‌ ಮಾಡಿಕೊಳ್ಳಬಹುದು ಎಂದು ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಡಿ.7 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12ರವೆರೆಗೆ ಪತ್ರಿಕೆ-1 ಹಾಗೂ ಪತ್ರಿಕೆ-2 ಮಧ್ಯಾಹ್ನ 2 ರಿಂದ 4ರವರೆಗೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಲಿಂಕ್‌ https://sts.karnataka.gov.in/TET/Loginpage.aspx ಮೂಲಕ ತಮ್ಮ ಲಾಗಿನ್‌ ವಿಳಾಸಗಳನ್ನು ಬಳಸಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು. KARTET 2025 ಹಾಲ್‌ ಟಿಕೆಟ್‌ ಡೌನ್ಲೋಡ್‌ … More

ವಿವಿಧ ಯೋಜನೆಯಡಿ ಸಹಾಯಧನ ಜೊತೆಗೆ ಸಾಲ ಸೌಲಭ್ಯ; ಅರ್ಜಿ ಆಹ್ವಾನ

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ(KCCDCL)ದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರವು ಕ್ರಿಶ್ಚಿಯನ್ ಸಮುದಾಯದ ಅಭ್ಯರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಿ, ಸ್ವಾವಲಂಬಿಗಳನ್ನಾಗಿ ಮಾಡುವ ಸದುದ್ದೇಶದಿಂದ ಗಂಗಾಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿಯೋಜನೆ, ಅರಿವು ವಿದ್ಯಾಭ್ಯಾಸ ಸಾಲ ಯೋಜನೆ ಸೇರಿ ವಿವಿಧ ಯೋಜನೆಗಳ ಅಡಿಯಲ್ಲಿ ಸಹಾಯಧನ ಹಾಗೂ ಸಾಲ ಸೌಲಭ್ಯಗಳನ್ನು ಒದಗಿಸಲಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಡಿ.15ರೊಳಗೆ KCCDC ಅಧಿಕೃತ ಜಾಲತಾಣ https://kccdclonline.karnataka.gov.in/Portal/SchemeList ಕ್ಕೆ … More

BWSSB ಎಂಜಿನಿಯರ್‌, ಸಹಾಯಕ, ಮಾಪನ ಓದುಗ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB)ಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದಲ್ಲಿ ಗ್ರೂಪ್‌ ಬಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಧಿಸೂಚನೆ ಹೊರಡಿಸಿದೆ. ಕ.ಕ ವೃಂದದಲ್ಲಿ 59 ಹುದ್ದೆ, ಉಳಿಕೆ ವೃಂದದಲ್ಲಿ 165 ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಪಿಯುಸಿ, ಕಲಾ/ವಾಣಿಜ್ಯ/ವಿಜ್ಞಾನ, ಎಂಜಿನಿಯರಿಂಗ್, ಡಿಪ್ಲೊಮಾ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ನ.17 ರಿಂದ ನ.25ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು, ಸದರಿ ಅರ್ಜಿ ಸಲ್ಲಿಕೆ ಕೊನೆ … More

ಬ್ಯಾಂಕ್ ಆಫ್ ಬರೋಡಾ(BOB)ದಲ್ಲಿ 2700 ಶಿಶಿಕ್ಷು ಹುದ್ದೆಗಳ ನೇಮಕಾತಿ

ಬ್ಯಾಂಕ್ ಆಫ್ ಬರೋಡಾ ದೇಶದ ವಿವಿಧ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಶಾಖೆಗಳಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ ಅಪ್ರೆಂಟಿಸ್‌ಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2700 ಅಪ್ರೆಂಟಿಸ್ ತರಬೇತಿಗೆ ಪದವೀಧರ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ತರಬೇತಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್ ಸೈಟ್ https://bankofbaroda.bank.in/career/current-opportunities ಗೆ ಭೇಟಿ ನೀಡಿ. ಡಿ.01ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ರಾಜ್ಯ/ಕೇಂದ್ರಾಡಳಿತ ಪ್ರದೇಶವಾರು ಖಾಲಿ ಇರುವ … More

IOCLನಲ್ಲಿ 2785 ಅಭ್ಯರ್ಥಿಗಳಿಗೆ ಅಪ್ರೆಂಟಿಸ್‌ಶಿಪ್‌

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ನ ವಿವಿಧ ಸಂಸ್ಕರಣಾಗಾರ ಘಟಕಗಳಲ್ಲಿ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ 2785 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅಧಿಸೂಚನೆ ಹೊರಡಿಸಿ, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಟ್ರೇಡ್ ಅಪ್ರೆಂಟಿಸ್, ತಂತ್ರಜ್ಞ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಲೆಕ್ಕಪರಿಶೋಧಕ ಹಾಗೂ ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಟ್ರೇಡ್‌/ವಿಭಾಗಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ನ.28 ರಿಂದ ಡಿ.18ರೊಳಗೆ IOCL ಅಧಿಕೃತ ಜಾಲತಾಣ https://www.iocrefrecruit.in/iocrefrecruit/indexಕ್ಕೆ ಭೇಟಿ ನೀಡಿ … More

ಸರ್ಕಾರದಿಂದ ನಾವಿನ್ಯತೆ/ಆವಿಷ್ಕಾರ ಪ್ರಶಸ್ತಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ 2025ನೇ ಸಾಲಿಗೆ ಪದವಿ, ಸ್ನಾತಕೋತ್ತರ ಪದವಿ, ಬೋಧಕರು ಹಾಗೂ ಜನಸಾಮಾನ್ಯರ ಆವಿಷ್ಕಾರ/ನಾವಿನ್ಯತೆಗೆ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ಆರ್ಥಿಕತೆಯ ಯಾವುದೇ ವಿಭಾಗದಿಂದ ಮೂಡಿದ ಜನಸಾಮಾನ್ಯರ ಅದರಲ್ಲೂ ಗ್ರಾಮೀಣ ಪ್ರದೇಶದ ಜನಜೀವನವನ್ನು ಪರಿವರ್ತಿಸಲು ಸಹಾಯಕವಾದ ಅಥವಾ ಉದ್ಯಮಗಳು ಹಾಗೂ ಉದ್ಯೋಗ ಸೃಷ್ಟಿಗೆ ಕಾರಣವಾದ ಅನುಕರಣೀಯ ಆವಿಷ್ಕಾರಗಳನ್ನು ಗುರುತಿಸಿ ಪದವಿ, ಸ್ನಾತಕೋತ್ತರ ಪದವಿ, ಬೋಧಕರು ಹಾಗೂ ಜನಸಾಮಾನ್ಯರಿಗೆ ನಗದು ಪುರಸ್ಕಾರದ … More

ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(KEONICS)ದಲ್ಲಿ ಉದ್ಯೋಗಾವಕಾಶ

ಕರ್ನಾಟಕ ಸರ್ಕಾರದ ಉದ್ಯಮ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್)ದಲ್ಲಿ ಖಾಲಿ ಇರುವ ತರಬೇತಿ ಸಲಹೆಗಾರ ಮತ್ತು ಕಾನೂನು ಸಲಹೆಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಐಸಿಟಿ (ICT) ತರಬೇತಿ ಸಲಹೆಗಾರ(01) ಮತ್ತು ಕಾನೂನು ಸಲಹೆಗಾರ (01) ಸೇರಿದಂತೆ ಒಟ್ಟು 02 ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.02 ರೊಳಗೆ ಸ್ವಯಂ ದೃಢೀಕರಿಸಿದ ದಾಖಲಾತಿಗಳನ್ನು … More

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ತರಬೇತಿದಾರರ ನೇಮಕಾತಿ

ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನ ಸ್ವಾಮ್ಯದ ಅಂಗಸಂಸ್ಥೆ ಕಂಪನಿಯಾಗಿರುವ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌(UCSL)ನಲ್ಲಿ ಡಿಪ್ಲೊಮಾ ಎಂಜಿನಿಯರಿಂಗ್ ತರಬೇತಿದಾರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಮೆಕ್ಯಾನಿಕಲ್ ಡಿಪ್ಲೊಮಾ ಎಂಜಿನಿಯರಿಂಗ್ ತರಬೇತಿದಾರ (12) ಹಾಗೂ ಎಲೆಕ್ಟ್ರಿಕಲ್ ಡಿಪ್ಲೊಮಾ ಎಂಜಿನಿಯರಿಂಗ್ ತರಬೇತಿದಾರ(04) ಸೇರಿದಂತೆ ಒಟ್ಟು 16 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಉದ್ಯೋಗಾಕಾಂಕ್ಷಿಗಳು ಡಿ.18ರೊಳಗೆ ಯುಸಿಎಸ್‌ಎಲ್ ಅಧಿಕೃತ ಜಾಲತಾಣ https://cochinshipyard.in/careerdetail/career_locations/730ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ … More

ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ 2025-26ನೇ ಸಾಲಿನಲ್ಲಿ ಕಲಾಕ್ಷೇತ್ರದಲ್ಲಿ ಅಭ್ಯಸಿಸುತ್ತಿರುವ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲು ಕನ್ನಡ ಸಂಸ್ಕೃತಿ ಇಲಾಖೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳಿಗೆ ಮಾತ್ರ ಸೀಮಿತವಾಗಿದೆ. ಅರ್ಹರಿಗೆ ತಲಾ 10,000 ರೂ. ಮೊತ್ತದ ಶಿಷ್ಯವೇತನ ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಆಯಾ ಜಿಲ್ಲೆಯ ಸಂಸೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ … More

ಯಾದಗಿರಿ | ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ(PMMSY)ಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಯಾದಗಿರಿ: ಜಿಲ್ಲೆಯ ಶಹಾಪೂರ, ವಡಗೇರಾ ತಾಲೂಕಿನ ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಧರತೀ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಹಾಪೂರ ಮೀನುಗಾರಿಕೆ ಸಹಾಯಕ ನಿರ್ದೇಶಕಿ ಪದ್ಮವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೀನುಗಾರಿಕೆಯಲ್ಲಿ ತೊಡಗಿಕೊಂಡಿರುವ ಬುಡಕಟ್ಟು ಸಮುದಾಯದ, ಪರಿಶಿಷ್ಟ ಪಂಗಡದವರಿಗೆ ಮೀನು ಮಾರಟಕ್ಕಾಗಿ ಐಸ್ ಬಾಕ್ಸ್‌ನೊಂದಿಗೆ ದ್ವಿಚಕ್ರ ವಾಹನ, ಐಸ್ ಬಾಕ್ಸ್ ಜೊತೆ ತ್ರಿಚಕ್ರ ವಾಹನ ಮತ್ತು ಜೀವಂತ ಮಾರಾಟ … More