ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ: ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ.ಸಿ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್‌ 27 ರಿಂದ 13 ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಕನ್ನಡ ಓದಲು, ಬರೆಯಲು ಬರುವ ರಾಜ್ಯದ ಎಲ್ಲಾ ಜಿಲ್ಲೆಯ 18-45 ವಯೋಮಾನದ ಪುರುಷ … More

SEBIನಲ್ಲಿ “ಎ” ದರ್ಜೆ ಅಧಿಕಾರಿ ಹುದ್ದೆಗಳ ನೇಮಕ: ಇದೇ 30 ರಿಂದ ಅರ್ಜಿ ಸಲ್ಲಿಸಿ

ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿ(SEBI)ಯು “ಎ” ದರ್ಜೆಯ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಮುಂಗಡ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಜಿ ಸ್ವೀಕಾರ ಅ.30ರಿಂದ ಪ್ರಾರಂಭವಾಗಲಿದೆ. ಸಾಮಾನ್ಯ, ಕಾನೂನು, ಮಾಹಿತಿ ತಂತ್ರಜ್ಞಾನ, ಸಂಶೋಧನಾ, ಅಧಿಕೃತ ಭಾಷಾ, ಎಂಜಿನಿಯರಿಂಗ್ (ಎಲೆಕ್ಟ್ರಿಕಲ್, ಸಿವಿಲ್) ವಿಭಾಗಗಳಲ್ಲಿ ಒಟ್ಟು 110 “ಎ” ದರ್ಜೆಯ ಅಧಿಕಾರಿ (ಸಹಾಯಕ ವ್ಯವಸ್ಥಾಪಕ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು SEBI ಅಧಿಕೃತ ವೆಬ್‌ಸೈಟ್‌ https://www.sebi.gov.in/sebiweb/other/careerdetail.jsp?careerId=391ಗೆ ಭೇಟಿ … More

ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳ ಭರ್ತಿ; ಹೀಗೆ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾ (BOB)ದ ಕಾರ್ಪೊರೇಟ್ ಮತ್ತು ಸಾಂಸ್ಥಿಕ ಕ್ರೆಡಿಟ್ ಸಿ & ಐಸಿ ಇಲಾಖೆಯಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ವಿಭಾಗಗಳಲ್ಲಿ ಖಾಲಿ ಇರುವ ಮ್ಯಾನೇಜರ್, ಹಿರಿಯ ವ್ಯವಸ್ಥಾಪಕ ಹಾಗೂ ಮುಖ್ಯ ವ್ಯವಸ್ಥಾಪಕ ಸೇರಿದಂತೆ ಒಟ್ಟು 50 ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್ ಸೈಟ್ … More

ಕಿರು ಉದ್ದಿಮೆ ಪ್ರಾರಂಭಿಸಲು ಸರ್ಕಾರದಿಂದ 15 ಲಕ್ಷ ರೂ.ವರೆಗೆ ಸಹಾಯಧನ: ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳ ಔಪಚಾರಿಕೀಕರಣ ಯೋಜನೆ (PMFME)ಯ ಆತ್ಮ ನಿರ್ಭರ ಭಾರತ ಅಭಿಯಾನದಡಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಘಟಕ ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಸೂಕ್ಷ್ಮ ಹಾಗೂ ಸಣ್ಣ ಆಹಾರ ಉದ್ದಿಮೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ PMFME ಯೋಜನೆಯನ್ನು ಜಾರಿಗೆ ತರಲಾಗಿದೆ. ಸದರಿ ಯೋಜನೆಯಲ್ಲಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಮತ್ತು ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ಸಾಲ ಸೌಲಭ್ಯ ಜೊತೆಗೆ ಗರಿಷ್ಠ 15 ಲಕ್ಷರೂ.ಗಳವರೆಗೆ ಸಹಾಯಧನವನ್ನು ಪಡೆಯುವ ಅವಕಾಶವಿದೆ. … More

ಯುಜಿಸಿ NET ಡಿಸೆಂಬರ್ 2025ರ ಪರೀಕ್ಷೆಗೆ ನೋಂದಣಿ ಪ್ರಾರಂಭ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA)ಯು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) 2025ರ ಡಿಸೆಂಬರ್ ಆವೃತ್ತಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ ನೋಂದಣಿಗೆ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ ಹೊಂದಲು ಮತ್ತು ಪಿಎಚ್‌ಡಿ ಪ್ರವೇಶ ಪಡೆಯಲು ಅರ್ಹತೆಯನ್ನು ನಿರ್ಧರಿಸುತ್ತದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಾಗಿದ್ದು, ಒಟ್ಟು 85 ವಿಷಯಗಳಿಗೆ ಪರೀಕ್ಷೆ ಇದೇ ಡಿಸೆಂಬರ್‌ನಲ್ಲಿ ನಡೆಯಲಿದೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನ.07ರವರೆಗೆ ಅವಕಾಶವಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು NTA ಅಧಿಕೃತ ವೆಬ್‌ಸೈಟ್ … More

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಮೈಸೂರು: ಆಹಾರ ನಾಗರಿಕ ಸರಬರಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ವತಿಯಿಂದ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮೈಸೂರು ನಗರದ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕ(ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿನ ನಜರ್ ಬಾದ್/ಲಷ್ಕರ್ ಮೊಹಲ್ಲಾ ವ್ಯಾಪ್ತಿಯ ಸಿ ಬ್ಲಾಕ್ ಗೌಸಿಯಾ ನಗರದಲ್ಲಿ ಪ್ರಸ್ತುತ ನೂತನವಾಗಿ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಸಂಘ ಸಂಸ್ಥೆಗಳಿಂದ ಅರ್ಜಿಯನ್ನು ಸ್ವೀಕಾರ ಪ್ರಾರಂಭಿಸಲಾಗಿದ್ದು, ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಹ ಮತ್ತು ಆಸಕ್ತ ಸಂಘ ಸಂಸ್ಥೆಗಳ … More

ಸೈನಿಕ ಶಾಲೆಯ 6ನೇ ಮತ್ತು 9ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) 2026-27ನೇ ಶೈಕ್ಷಣಿಕ ಸಾಲಿನ ಅಖಿಲ ಭಾರತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆ (AISSEE)ಗೆ ಅರ್ಜಿ ಆಹ್ವಾನಿಸಿದೆ. ದೇಶದಾದ್ಯಂತ ಸೈನಿಕ ಶಾಲೆಗಳಲ್ಲಿ 6 ಮತ್ತು 9ನೇ ತರಗತಿಗಳ ಪ್ರವೇಶತಿಗಾಗಿ ನಡೆಸಲಾಗುವ ಪರೀಕ್ಷೆ ಇದಾಗಿದೆ. ಪ್ರಸ್ತುತ 5ನೇ ಮತ್ತು 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತ ಜಾಲತಾಣ https://exams.nta.nic.in/sainik-school-society/ಕ್ಕೆ ಭೇಟಿ ನೀಡಿ ಅ.30ರೊಳಗೆ ಮೂಲಕ ಅರ್ಜಿ … More

ಕೋಟಕ್ ಕನ್ಯಾ ಸ್ಕಾಲರ್ಶಿಪ್: 1.5 ಲಕ್ಷಗಳ ವರೆಗೆ ವಿದ್ಯಾರ್ಥಿ ವೇತನ..!

ಪ್ರಸಕ್ತ 2025-26ನೇ ಸಾಲಿಗೆ ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು ಮತ್ತು ಕೋಟಕ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದ ಸಿಎಸ್ಆರ್ ಯೋಜನೆಯಡಿಯಲ್ಲಿ ಕೋಟಕ್ ಕನ್ಯಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಮಾಜದ ಆರ್ಥಿಕವಾಗಿ ಹಿಂದುಳಿದ ವರ್ಗಗಳಲ್ಲಿ ಶಿಕ್ಷಣ ಮತ್ತು ಜೀವನೋಪಾಯವನ್ನು ಉತ್ತೇಜಿಸಲು ಉದ್ದೇಶಿಸಿದೆ. ಈ ವಿದ್ಯಾರ್ಥಿವೇತನವು ಕಡಿಮೆ ಆದಾಯದ ಕುಟುಂಬಗಳ ಪ್ರತಿಭಾನ್ವಿತ ಹೆಣ್ಣು ಮಕ್ಕಳಿಗೆ 12ನೇ ತರಗತಿಯ ನಂತರ ವೃತ್ತಿಪರ ಶಿಕ್ಷಣದಲ್ಲಿ ಉನ್ನತ ಅಧ್ಯಯನ ಮಾಡಲು ಆರ್ಥಿಕ ನೆರವು ನೀಡುವ ಗುರಿ ಹೊಂದಿದೆ. ಅರ್ಜಿ ಸಲ್ಲಿಕೆಗೆ ಅ.31 ಕೊನೆ ದಿನವಾಗಿದ್ದು, ಆಸಕ್ತರು … More

ಹೆಣ್ಣು ಮಗಳನ್ನು ಹೊಂದಿರುವವರಿಗೆ CBSEಯಿಂದ ಪ್ರ.ತಿಂಗಳು 1000ರೂ. ವಿದ್ಯಾರ್ಥಿವೇತನ: ಅರ್ಜಿ ಆರಂಭ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ವತಿಯಿಂದ 2024-25ನೇ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ಒಂಟಿ ಹೆಣ್ಣು ಮಕ್ಕಳ ವಿದ್ಯಾರ್ಥಿಗಳಿಗೆ ಮೆರಿಟ್ ವಿದ್ಯಾರ್ಥಿವೇತನ ಯೋಜನೆಯಡಿ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಒಬ್ಬಳೇ ಹೆಣ್ಣು ಮಗಳನ್ನು ಹೊಂದಿರುವ ಪೋಷಕರು ಅರ್ಜಿ ಸಲ್ಲಿಸಲು ಅರ್ಹರು. 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಿಬಿಎಸ್‌ಇ ಸಂಯೋಜಿತ ಕಾಲೇಜಿನಲ್ಲಿ 11ನೇ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಂದ ಹೊಸ ಅರ್ಜಿ ಸಲ್ಲಿಕೆ ಹಾಗೂ 2024ರಲ್ಲಿ ಸಲ್ಲಿಸಿದ್ದ ಅರ್ಜಿಗಳ ನವೀಕರಣಕ್ಕಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಅ.23 … More

UPSC NDA – (I)ರ ಅಂತಿಮ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು (UPSC) ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ (I), 2025ರ ಅಂತಿಮ ಫಲಿತಾಂಶವನ್ನು ಅ.10 ರಂದು ಬಿಡುಗಡೆ ಮಾಡಿದೆ. ಏಪ್ರಿಲ್ 13, 2025ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಅಂತಿಮವಾಗಿ SSB ಸಂದರ್ಶನವನ್ನು ನಡೆಸಲಾಗಿತ್ತು. ಇದೀಗ ಸದರಿ ಸಂದರ್ಶನದ ಆಧಾರದ ಮೇಲೆ ಅರ್ಹತೆ ಪಡೆದ 735 ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು UPSC ಅಧಿಕೃತ ವೆಬ್ಸೈಟ್ http://www.upsc.gov.in ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಫಲಿತಾಂಶವನ್ನು ಪರಿಶೀಲಿಸಬಹುದು. UPSC NDA … More