RDPR: ಓಂಬುಡ್ಸ್‌ಪರ್ಸನ್ಸ್‌ ಹುದ್ದೆಗಳ ಭರ್ತಿ

ಪದವಿ ಅರ್ಹತೆ | ಅರ್ಜಿ ಸಲ್ಲಿಕೆಗೆ ಏ.24ರ ಗಡುವು

Published on:

ಫಾಲೋ ಮಾಡಿ
RDPR Karnataka Ombudsperson Notification 2026
RDPR Karnataka Notification 2026

ಬೆಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅನುಷ್ಠಾನ ಸಂಬಂಧ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ವಿವಿಧ ಜಿಲ್ಲೆಗಳಿಗೆ ಓಂಬುಡ್ಸ್‌ಪರ್ಸನ್ಸ್‌ ನೇಮಕಾತಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಕೊಪ್ಪಳ, ಕೋಲಾರ ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಇದು ಅರೆಕಾಲಿಕ ಹುದ್ದೆಯಾಗಿದ್ದು, ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ಜಾಲತಾಣ(rdpr.karnataka.gov.in)ದ ಮೂಲಕ ಅರ್ಜಿ ನಮೂನೆ ಡೌನ್ಲೋಡ್‌ ಮಾಡಿ, ಭರ್ತಿ ಮಾಡಿ ಜೊತೆಗೆ ನಿಗದಿತ ದಾಖಲೆಗಳನ್ನು ಲಗತ್ತಿಸಿ ಏ.24ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ‘ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ. 5ನೇ ಮಹಡಿ, ಪ್ಯಾಟ್ ನಂ.1243, ಕೆಎಸ್‌ಐಐಡಿಸಿ ಕಟ್ಟಡ ಐಟಿ ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು-560010’ ವಿಳಾಸಕ್ಕೆ ತಲುಪುವಂತೆ ಸಲ್ಲಿಸಬೇಕು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment