ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ(Rajiv Gandhi University of Health Sciences)ದಲ್ಲಿ ಉಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಆಹ್ವಾನಿಸಿದೆ.
ಜೂನಿಯರ್ ಪ್ರೋಗ್ರಾಮರ್, ಸಹಾಯಕ ಇಂಜಿನಿಯರ್, ಗ್ರಂಥಪಾಲಕ ಸೇರಿ ಒಟ್ಟು ಉಳಿಕೆ ವೃಂದದಲ್ಲಿ 40 ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 04 ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನ.10(ಉಳಿಕೆ ವೃಂದ – ಅ.31)ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಈ ಕೆಳಗಿನ ವಿದ್ಯಾರ್ಹತೆ ಹೊಂದಿರಬೇಕು;
ಜೂನಿಯರ್ ಪ್ರೋಗ್ರಾಮರ್ –ಎಲೆಕ್ಟ್ರಾನಿಕ್ಸ್ನಲ್ಲಿ ಇಂಜಿನಿಯರಿಂಗ್ ಅಥವಾ ಎಂಸಿಎ ಸಹಾಯಕ ಇಂಜಿನಿಯರ್ – ಸಿವಿಲ್ನಲ್ಲಿ ಇಂಜಿನಿಯರಿಂಗ್ ಸಹಾಯಕ ಗ್ರಂಥಪಾಲಕ – ಲೈಬ್ರರಿ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ ಸಹಾಯಕ – ಯಾವುದೇ ಪದವಿ ಕಿರಿಯ ಸಹಾಯಕ – ಪಿಯುಸಿ
ವಯಸ್ಸಿನ ಮಿತಿ:
ಅರ್ಜಿ ಸ್ವೀಕರಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರಬೇಕು.
ಗರಿಷ್ಠ ವಯಸ್ಸಿನ ಮಿತಿ; ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – 38 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 41 ವರ್ಷಗಳು ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ – 43 ವರ್ಷಗಳು
ವೇತನ:
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ, ಮಾಸಿಕ ರೂ.21,400/- ರಿಂದ ರೂ.83,900/- ವರೆಗೆ ವೇತನ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ಅರ್ಜಿ ಶುಲ್ಕ:
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ.750/-
ಪ.ಜಾತಿ/ಪ.ಪಂಗಡ, ಮಾಜಿ ಸೇನಿಕ ಅಭ್ಯರ್ಥಿಗಳಿಗೆ- 500/-
ವಿಕಲಚೇತನ ಅಭ್ಯರ್ಥಿಗಳಿಗೆ – 250/-
How to Apply for RGUHS Recruitment 2025
ಅರ್ಜಿ ಸಲ್ಲಿಸುವ ವಿಧಾನ;
ಅಧಿಕೃತ ಜಾಲತಾಣ https://cetonline.karnataka.gov.in/VAOResult/DigilockerReg.aspxಕ್ಕೆ ಭೇಟಿ ನೀಡಿ. ನಂತರ ನಿಮ್ಮ ಇ-ಮೇಲ್, ದೂರವಾಣಿ ಸಂಖ್ಯೆ ನೀಡಿ ರೆಜಿಸ್ಟರ್ ಆಗಿರಿ.
ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲ ವಿವರಗಳನ್ನು ಪೂರೈಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳು ಮತ್ತು ನಿಮ್ಮ ಇತ್ತೀಚಿನ ಛಾಯಾಚಿತ್ರ ಅಪ್ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
ನೀವು ನೀಡಿರುವ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಂಡು ಪ್ರಿಂಟ್ ತೆಗೆದಿಟ್ಟುಕೊಳ್ಳಿ.
ನಂತರ ಅರ್ಜಿಯನ್ನು Submit ಮಾಡಿ ಅರ್ಜಿ ಸಂಖ್ಯೆಯನ್ನು ಸೆರೆಹಿಡಿಯಿರಿ.
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.
Supar
ಕೃಷಿ ಇಲಾಖೆ