ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಅರ್ಜಿ ಆರಂಭ

2026-27ನೇ ಸಾಲಿನಲ್ಲಿ ವಿವಿಧ ನಿಗಮಗಳಿಂದ “ಗಂಗಾ ಕಲ್ಯಾಣ ನೀರಾವರಿ ಯೋಜನೆ”ಯ ಸಹಾಯಧನದ ಜೊತೆಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈ ಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಕೃಷಿ ಜಮೀನಿನಲ್ಲಿ ಕೊಳವೆಬಾವಿ ಕೊರೆದು, ಪಂಪಸೆಟ್ ಸರಬರಾಜು ಮಾಡಿ, ಅಳವಡಿಸಿ ವಿದ್ಯುದ್ದೀಕರಣಗೊಳಿಸಿ, ನೀರಾವರಿ ಸೌಲಭ್ಯ ಕಲ್ಪಿಸುವ ಗುರಿಯನ್ನ ಹೊಂದಿದೆ. ಗಂಗಾ ಕಲ್ಯಾಣ ಯೋಜನೆಯು 1983 ರಿಂದ ಪ್ರಾರಂಭವಾಯಿತು. ಕರ್ನಾಟಕ ಗಂಗಾ ಕಲ್ಯಾಣ ಯೋಜನೆ 2026-27 ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಮೂರು ಬಗೆಗಳು ಅವುಗಳು … More

ಸರ್ಕಾರದಿಂದ ‘ವರ್ಕ್‌-ಫ್ರಮ್-ಹೋಮ್‌ʼ ಹುದ್ದೆಗಳ ಭರ್ತಿ; ಸಂದರ್ಶನಕ್ಕೆ ಕರೆ

ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್‌ಎಎಸ್‌ಟಿ) ವತಿಯಿಂದ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಹಾಗೂ ಕೆಎಎಸ್‌ಎಸ್‌ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಮನೆಯಿಂದಲೇ ಕೆಲಸ ಮಾಡುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಕಾರ್ಯಕಾರಿ ನಿರ್ದೇಶಕರು ತಿಳಿಸಿದ್ದಾರೆ. ಎಬಿ-ಎಆರ್‌ಕೆ ಯೋಜನೆಯಡಿ ಕಾರ್ಯನಿರ್ವಾಹಕ ವೈದ್ಯರು(ಪ್ರಿಆಥರೈಸೇಶನ್/ಕ್ಲೈಮ್ಸ್/ಆಡಿಟ್) 14 ಹುದ್ದೆಗಳು ಹಾಗೂ ಕೆಎಎಸ್‌ಎಸ್‌ ಯೋಜನೆಯಡಿ ಕಾರ್ಯನಿರ್ವಾಹಕ ವೈದ್ಯರು(ಪ್ರಿಆಥರೈಸೇಶನ್/ಕ್ಲೈಮ್ಸ್) ಹಾಗೂ ಕ್ಲೈಮ್‌ ಕಾರ್ಯನಿರ್ವಾಹಕ 06 ಹುದ್ದೆಗಳಿಗೆ ಸಂದರ್ಶನದ ನಡೆಯಲಿದೆ. … More

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಪ್ರಾರಂಭ – Free Sewing Machine Scheme 2026-27

2026-27ನೇ ಸಾಲಿಗೆ ಜಿಲ್ಲಾ ವಲಯ ಯೋಜನೆಯ ಉಚಿತವಾಗಿ ಸುಧಾರಿತ ಸಲಕರಣೆ ಪೂರೈಕೆ ಯೋಜನೆಯಡಿ ಜಿಲ್ಲಾ ಪಂಚಾಯತ್, ಗ್ರಾಮೀಣ ಕೈಗಾರಿಕೆಗಳ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಗ್ರಾಮೀಣ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ(Free Power Operated Sewing Machine)ವಿತರಣೆಗಾಗಿ ರಾಜ್ಯದ ನಾನಾ ಜಿಲ್ಲೆಯ ಗ್ರಾಮೀಣ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ 18-45(ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ವಯೋಮಿತಿಯು ಹೆಚ್ಚು-ಕಡಿಮೆಯಾಗಬಹುದು) ವರ್ಷದ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. … More

ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ

ಯಾದಗಿರಿ: ಜಿಲ್ಲಾ ಕೃಷಿ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ರಾಜ್ಯ ವಲಯ ಕೃಷಿ ಯಾಂತ್ರಿಕರಣ ಯೋಜನೆಯಡಿ “ಹೈಟೆಕ್ ಹಾರ್ವೆಸ್ಟರ್ ಹಬ್” ಸ್ಥಾಪನೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶ್ರೀ ರತೇಂದ್ರನಾಥ ಸೂಗೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಟ್ಟು 02 (ಸಾಮಾನ್ಯ ವರ್ಗದಡಿ 01, ವಿಶೇಷ ಘಟಕ ಯೋಜನೆಯಡಿ 01) ಕಂಬೈನ್ ಹೈಟೆಕ್‌ ಹಾರ್ವೆಸ್ಟರ್‌ ಹಬ್‌ ಸ್ಥಾಪನೆಗಾಗಿ ಸಾಮಾನ್ಯ ವರ್ಗದಡಿ ಗರಿಷ್ಠ ಶೇ.50 ರಂತೆ ಹಾಗೂ ಪರಿಶಿಷ್ಟ ಜಾತಿ ವರ್ಗದ ರೈತರಿಗೆ … More

ಕಲಬುರಗಿ | ಉಚಿತ ಹೊಲಿಗೆಯಂತ್ರ, ಧೋಬಿ, ಕ್ಷೌರಿಕ ವೃತ್ತಿಯ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕಲಬುರಗಿ: ಜಿಲ್ಲಾ ಪಂಚಾಯತ್ ವತಿಯಿಂದ 2026-27ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಉಚಿತ ಸುಧಾರಿತ ವೃತ್ತಿಪರ ಉಪಕರಣಗಳನ್ನು ಪಡೆಯುವುದಕ್ಕಾಗಿ ಜಿಲ್ಲೆಯ ಅರ್ಹ ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಂದ ತಾಲೂಕುವಾರು ಹಾಗೂ ಪ್ರವರ್ಗವಾರು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‌ ಉಪ ನಿರ್ದೇಶಕರು(ಗ್ರಾ.ಕೈ.) ತಿಳಿಸಿದ್ದಾರೆ. ಧೋಬಿ ವೃತ್ತಿ, ಕ್ಷೌರಿಕ ವೃತ್ತಿಯ ಉಪಕರಣಗಳನ್ನು ಪಡೆಯಲು ಎಲ್ಲಾ ವರ್ಗದವರು ಅರ್ಹರು ಹಾಗೂ ವಿದ್ಯುತಚಾಲಿತ ಹೊಲಿಗೆಯಂತ್ರಗಳಿಗೆ ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಅಭ್ಯರ್ಥಿಯು ವಯಸ್ಸಿನ ಮಿತಿಯು 20-07-2026ರಂತೆ ಕನಿಷ್ಠ 18 ವರ್ಷ ವಯೋಮಾನದವರಾಗಿರಬೇಕು. … More

ಸ್ವ ಉದ್ಯೋಗಕ್ಕೆ ಸಾಲ-ಸಹಾಯಧನ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2026-27ನೇ ಸಾಲಿನ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ಸಾಲ-ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಸಮುದಾಯದ(ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ನೆರವು ನೀಡಿ, ಸ್ವಾವಲಂಬಿಗಳನ್ನಾಗಿಸುವ ಧ್ಯೇಯೋದ್ದೇಶ ಹೊಂದಿದೆ. ಯೋಜನೆಯಡಿ ₹1 ಲಕ್ಷದಿಂದ ₹2 ಲಕ್ಷದವರೆಗೆ ಸಾಲ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಇದರಲ್ಲಿ ಶೇ.20ರಷ್ಟು ಸಹಾಯಧನ ಹಾಗೂ ಉಳಿದ ಶೇ.80ರಷ್ಟು ಸಾಲದ ಮೊತ್ತವಾಗಿರುತ್ತದೆ. ಅಭ್ಯರ್ಥಿಯು ಶೇ.4ರ ಬಡ್ಡಿದರದಲ್ಲಿ 34 ಕಂತುಗಳಲ್ಲಿ ಸಾಲವನ್ನು … More

ಉಚಿತ UPSC ನಾಗರಿಕ ಸೇವೆಗಳ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿಗೆ ಉಚಿತ ಊಟ-ವಸತಿ ಸಹಿತ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷಾ ಪೂರ್ವ ತರಬೇತಿಗಾಗಿ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ವರ್ಗದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಹುದು. ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ತರಬೇತಿ ಸಮಯದಲ್ಲಿ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು https://bcwd.karnataka.gov.in ಅಥವಾ … More

ಉಚಿತ ಹೊಲಿಗೆ ಯಂತ್ರ, ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನ

ಯಾದಗಿರಿ: ಜಿಲ್ಲೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ವಲಯ ಯೋಜನೆಯ ವೃತ್ತಿಪರ ಕುಶಲಕರ್ಮಿಗಳಿಗೆ ‘ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆ’ಯಡಿ ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರು(ಗ್ರಾಕೈ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ವಿದ್ಯುತ್‌ ಚಾಲಿತ ಹೊಲಿಗೆ ಯಂತ್ರ ಹಾಗೂ ವೃತ್ತಿನಿರತ ಬಡಿಗೆತನ ವೃತ್ತಿಯ ಕಸಬುದಾರರಿಗೆ ಉಚಿತವಾಗಿ ಉಪಕರಣ ವಿತರಿಸಲಾಗುವುದು. ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವ ಮಹಿಳೆಯು ಕನಿಷ್ಠ 8ನೇ ತರಗತಿ ತೇರ್ಗಡೆ ಹೊಂದಿದ್ದು, … More

ದೇವದಾಸಿಯರ ಮಕ್ಕಳ ಮದುವೆಗೆ ಸರ್ಕಾರದಿಂದ ಸಿಗಲಿದೆ ₹8ಲಕ್ಷವರೆಗೆ ಪ್ರೋತ್ಸಾಹಧನ

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ದೇವದಾಸಿ ಮಕ್ಕಳ ವಿವಾಹ ಪ್ರೋತ್ಸಾಹಧನವನ್ನು ಒದಗಿಸುತ್ತಿದೆ. ಪ.ಜಾತಿ/ಪ.ಪಂಗಡದ ದೇವದಾಸಿಯರ ಮಕ್ಕಳನ್ನು ವಿವಾಹವಾಗುವವರಿಗೆ ರೂ.8ಲಕ್ಷಗಳವರೆಗೆ(ಪುರುಷನಿಗೆ ರೂ.3ಲಕ್ಷ ಹಾಗೂ ಮಹಿಳೆಗೆ ರೂ.5ಲಕ್ಷದವರೆಗೆ) ಪ್ರೋತ್ಸಾಹಧನ ಒದಗಿಸಲಿದೆ. ಈ ಮೂಲಕ ದೇವದಾಸಿಯರ ಮಕ್ಕಳಿಗೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ನೆರವು ನೀಡುವ ಧ್ಯೇಯ ಈ ಯೋಜನೆ ಹೊಂದಿದೆ. ಮದುವೆಯಾದ ಒಂದುವರೆ ವರ್ಷ(18 ತಿಂಗಳು)ದೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಯಾ ಇಲಾಖೆ ಅಧಿಕೃತ ಜಾಲತಾಣಗಳಾದ https://swdservices.karnataka.gov.in/ ಅಥವಾ https://twd.karnataka.gov.in/ಗೆ ಭೇಟಿ ನೀಡಿ. ಸದರಿ … More

2026ನೇ ಸಾಲಿನ ITI ಪ್ರವೇಶಾತಿಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ(ಡಿಐಟಿಇ)ಯು ಆಗಸ್ಟ್‌ 2026ನೇ ಶೈಕ್ಷಣಿಕ ಸಾಲಿನ ಕೈಗಾರಿಕಾ ತರಬೇತಿ ಸಂಸ್ಥೆಗಳ(ಐಟಿಐ) ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಮೇ 08ರವರೆಗೆ ಕಾಲಾವಕಾಶವಿದೆ. ರಾಜ್ಯದ 270 ಸರ್ಕಾರಿ ಹಾಗೂ 192 ಅನುದಾನಿತ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿನ ಎನ್.ಸಿ.ವಿ.ಟಿ ಸಂಯೋಜಿತ ಸಿಟಿಎಸ್ ಯೋಜನೆಯಡಿಯಲ್ಲಿರುವ ಇಂಜಿನಿಯರಿಂಗ್ ಹಾಗೂ ನಾನ್-ಇಂಜಿನಿಯರಿಂಗ್ ವೃತ್ತಿಗಳಿಗೆ ಪ್ರವೇಶ ನಡೆಯಲಿದೆ. ವೃತ್ತಿಯ ಅನುಗುಣವಾಗಿ 8ನೇ ತರಗತಿ ಉತ್ತೀರ್ಣ ಹಾಗೂ 10ನೇ ತರಗತಿ ಉತ್ತೀರ್ಣರಾದ/ಅನುತ್ತೀರ್ಣರಾದ ಅಭ್ಯರ್ಥಿಗಳು … More