“ಆಹಾರ ವಾಹಿನಿ”ಯಡಿ ₹3 ಲಕ್ಷ ಸಹಾಯಧನ; ಅರ್ಜಿ ಆಹ್ವಾನ

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಆಹಾರ ವಾಹಿನಿ(ಆಹಾರ ಕಿಯೋಸ್ಟ್) ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಒಕ್ಕಲಿಗ ಅಥವಾ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು. ಸರ್ಕಾರ ಸದರಿ ಯೋಜನೆಯಡಿ ನಾಲ್ಕು ಚಕ್ರಗಳ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ಒಳಗೊಂಡ ಇವಿ-ಗೂಡ್ಸ್ ವಾಹನಗಳ ಖರೀದಿಗೆ 3 ಲಕ್ಷರೂ.ವರೆಗೆ ಸಹಾಯಧನ ನೀಡುತ್ತಿದೆ. ಸ್ವಂತ ಉದ್ಯೋಗ ಕೈಗೊಳ್ಳಲು ಆಸಕ್ತಿ ಹೊಂದಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ನಿಗದಿತ ಕೊನೆಯ … More

PSI ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ವಸತಿ ಸಹಿತ ಸಬ್‌ ಇನ್‌ಸ್ಪೆಕ್ಟರ್‌(PSI) ಆಯ್ಕೆ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗದ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಪದವೀಧರ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತರಬೇತಿಗೆ ಅರ್ಹರು. ತರಬೇತಿ ಅವಧಿ ಅಂದಾಜು 75 ದಿನಗಳಾಗಿರುತ್ತವೆ. ಈ ಅವಧಿಯಲ್ಲಿ ಉಚಿತ ವಸತಿ ಜೊತೆಗೆ ಊಟದ ವ್ಯವಸ್ಥೆ ಇರುತ್ತದೆ. ಆಸಕ್ತರು http://164.100.133.164:81/PSI_2526/App_form.aspxಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ … More

ಪಿಎಚ್.ಡಿ ಅಭ್ಯರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ. ರಾಜ್ಯದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಹಾಗೂ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-I, II(ಎ), III(ಎ) ಹಾಗೂ III(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಮಾಹೆಯಾನ 10,000ರೂ. ವರೆಗೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ನೀಡಲಾಗುತ್ತದೆ. ಸದರಿ ಯೋಜನೆಯಡಿ ಸೌಲಭ್ಯವನ್ನು ಪಡೆಯಲು … More

Udyogini Scheme 2025: ಮಹಿಳೆಯರಿಗೆ ಸಿಗಲಿದೆ ಶೇ.30 ರಿಂದ 50ರಷ್ಟು ಸಹಾಯಧನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ(KSWDC)ದ ವತಿಯಿಂದ 2025-26 ನೇ ಸಾಲಿಗೆ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಿಸುವ ಗುರಿಯನ್ನು ಉದ್ಯೋಗಿನಿ ಯೋಜನೆ ಹೊಂದಿದೆ. ಇದಕ್ಕೆ ಪೂರಕವಾಗಿ ಬ್ಯಾಂಕುಗಳ ಮೂಲಕ ಸಾಲ ಜೊತೆಗೆ ನಿಗಮದಿಂದ ಶೇ.30 ರಿಂದ ಶೇ.50 ರಷ್ಟು ಸಹಾಯಧನ ನೀಡಲಾಗುತ್ತದೆ. 18 ರಿಂದ 55 ವರ್ಷದ ವಯೋಮಾನದ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರು. ಅರ್ಹ ಫಲಾಪೇಕ್ಷಿಗಳು 2026ರ ಜ.15ರೊಳಗೆ ಸೇವಾಸಿಂಧು ಪೋರ್ಟಲ್‌ https://sevasindhu.karnataka.gov.in/ ಮೂಲಕ ಅರ್ಜಿ … More

KSWDC Loan Schemes: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಸಬ್ಸಿಡಿ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರನ್ನು ಸ್ವಾವಲಂಬಿ ಆಗಿಸುವ ನಿಟ್ಟಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಡಿ ನಿಗಮದಿಂದ ಸಹಾಯಧನ ಜೊತೆಗೆ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಒದಗಿಸಲಾಗುತ್ತದೆ. 18 ರಿಂದ 60 ವರ್ಷದ ವಯೋಮಾನದ ಮಹಿಳೆಯರು ಸೇವಾ ಸಿಂಧು ಪೋರ್ಟಲ್‌ http://sevasindhuservices.karnataka.gov.in/ಗೆ ಭೇಟಿ ನೀಡಿ 2026ರ ಜ.15ರೊಳಗೆ ಅರ್ಜಿ … More

ಮಹಿಳಾ ಅಭಿವೃದ್ಧಿ ನಿಗಮ; ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಯಾದಗಿರಿ: 2025-26ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ(KSWDC)ದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜನವರಿ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರು ತಿಳಿಸಿದ್ದಾರೆ. ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಲಾಪೇಕ್ಷಿಗಳು ಸೌಲಭ್ಯ ಪಡೆಯಲು ಸೇವಾ ಸಿಂಧು … More

ಬಿ.ಎಡ್ ವಿದ್ಯಾರ್ಥಿಗಳಿಗೆ ₹25,000 ವಿಶೇಷ ಪ್ರೋತ್ಸಾಹಧನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಗೆ 25,000 ರೂ.ವರೆಗೆ ವಿಶೇಷ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಡಿ.31ರೊಳಗೆ ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು; … More

ವಿವಿಧ ಯೋಜನೆಯಡಿ ಸಹಾಯಧನ ಜೊತೆಗೆ ಸಾಲ ಸೌಲಭ್ಯ; ಅರ್ಜಿ ಆಹ್ವಾನ

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ(KCCDCL)ದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರವು ಕ್ರಿಶ್ಚಿಯನ್ ಸಮುದಾಯದ ಅಭ್ಯರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಿ, ಸ್ವಾವಲಂಬಿಗಳನ್ನಾಗಿ ಮಾಡುವ ಸದುದ್ದೇಶದಿಂದ ಗಂಗಾಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿಯೋಜನೆ, ಅರಿವು ವಿದ್ಯಾಭ್ಯಾಸ ಸಾಲ ಯೋಜನೆ ಸೇರಿ ವಿವಿಧ ಯೋಜನೆಗಳ ಅಡಿಯಲ್ಲಿ ಸಹಾಯಧನ ಹಾಗೂ ಸಾಲ ಸೌಲಭ್ಯಗಳನ್ನು ಒದಗಿಸಲಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಡಿ.15ರೊಳಗೆ KCCDC ಅಧಿಕೃತ ಜಾಲತಾಣ https://kccdclonline.karnataka.gov.in/Portal/SchemeList ಕ್ಕೆ … More

ಸರ್ಕಾರದಿಂದ ನಾವಿನ್ಯತೆ/ಆವಿಷ್ಕಾರ ಪ್ರಶಸ್ತಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ 2025ನೇ ಸಾಲಿಗೆ ಪದವಿ, ಸ್ನಾತಕೋತ್ತರ ಪದವಿ, ಬೋಧಕರು ಹಾಗೂ ಜನಸಾಮಾನ್ಯರ ಆವಿಷ್ಕಾರ/ನಾವಿನ್ಯತೆಗೆ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ಆರ್ಥಿಕತೆಯ ಯಾವುದೇ ವಿಭಾಗದಿಂದ ಮೂಡಿದ ಜನಸಾಮಾನ್ಯರ ಅದರಲ್ಲೂ ಗ್ರಾಮೀಣ ಪ್ರದೇಶದ ಜನಜೀವನವನ್ನು ಪರಿವರ್ತಿಸಲು ಸಹಾಯಕವಾದ ಅಥವಾ ಉದ್ಯಮಗಳು ಹಾಗೂ ಉದ್ಯೋಗ ಸೃಷ್ಟಿಗೆ ಕಾರಣವಾದ ಅನುಕರಣೀಯ ಆವಿಷ್ಕಾರಗಳನ್ನು ಗುರುತಿಸಿ ಪದವಿ, ಸ್ನಾತಕೋತ್ತರ ಪದವಿ, ಬೋಧಕರು ಹಾಗೂ ಜನಸಾಮಾನ್ಯರಿಗೆ ನಗದು ಪುರಸ್ಕಾರದ … More

ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(KEONICS)ದಲ್ಲಿ ಉದ್ಯೋಗಾವಕಾಶ

ಕರ್ನಾಟಕ ಸರ್ಕಾರದ ಉದ್ಯಮ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್)ದಲ್ಲಿ ಖಾಲಿ ಇರುವ ತರಬೇತಿ ಸಲಹೆಗಾರ ಮತ್ತು ಕಾನೂನು ಸಲಹೆಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಐಸಿಟಿ (ICT) ತರಬೇತಿ ಸಲಹೆಗಾರ(01) ಮತ್ತು ಕಾನೂನು ಸಲಹೆಗಾರ (01) ಸೇರಿದಂತೆ ಒಟ್ಟು 02 ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.02 ರೊಳಗೆ ಸ್ವಯಂ ದೃಢೀಕರಿಸಿದ ದಾಖಲಾತಿಗಳನ್ನು … More