ಉಚಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್(PSI) ಪೂರ್ವ-ನೇಮಕಾತಿ ತರಬೇತಿಗೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಲು ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸದಾವಕಾಶವಾಗಿದ್ದು, ಪ.ಜಾತಿಯ ಅಭ್ಯರ್ಥಿಗಳಿಗೆ ಉಚಿತವಾಗಿ 90 ದಿನಗಳವರೆಗೆ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪೂರ್ವ-ನೇಮಕಾತಿ ತರಬೇತಿಯನ್ನು ನೀಡಲಾಗುತ್ತದೆ. ಪದವಿ ಪೂರ್ಣಗೊಳಿಸಿರುವ ಆಸಕ್ತ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://swdservices.karnataka.gov.in/petccoaching/PSIHomeKan.aspxದ ಮೂಲಕ ಸೆಪ್ಟೆಂಬರ್ 12ರೊಳಗೆ … More

ಪ.ಜಾತಿಯ ಅಭ್ಯರ್ಥಿಗಳಿಗೆ ಉಚಿತ ಡ್ರೋನ್‌ ತರಬೇತಿ ನೀಡಲು ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ವತಿಯಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಯುತ ಡ್ರೋನ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಲಾಜಿಸ್ಟಿಕ್ಸ್, ಕಣ್ಗಾವಲು, ಕೃಷಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಡ್ರೋನ್ ಉಪಕರಣವನ್ನು ಉಪಯೋಗಿಸುವ ಕುರಿತು 15 ದಿನಗಳವರೆಗೆ ವಸತಿಯುತ ಡ್ರೋನ್ ತರಬೇತಿ ನೀಡಲಿದೆ, ಡ್ರೋನ್ ಕಲಿಕೆಯಲ್ಲಿ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಸೆ.20ರೊಳಗೆ https://swdservices.karnataka.gov.in/petccoaching/DroneHome.aspxಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: … More

ವಿಕಲಚೇತನ ಅಭ್ಯರ್ಥಿಗಳಿಗೆ ವಿವಿಧ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ವಿಕಲಚೇತನ ಅಭ್ಯರ್ಥಿಗಳಿಗೆ ಫಲಾನುಭವಿ ಆಧಾರಿತ ಯೋಜನೆಗಳಡಿ ವಿವಿಧ ಸೌಲಭ್ಯಗಳನ್ನು ನೀಡಲು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2025-26ನೇ ಸಾಲಿಗೆ ಒಟ್ಟು 13 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ನೇರ ನಗದು ವರ್ಗಾವಣೆ(ಡಿ.ಬಿ.ಟಿ) ಮೂಲಕ ಫಲಾನುಭವಿಗಳಿಗೆ ಹಣ ಜಮೆ ಆಗಲಿದೆ. ಅರ್ಹ ವಿಕಲಚೇತನ ಅಭ್ಯರ್ಥಿಗಳು https://sevasindhu.karnataka.gov.in/ಗೆ ಭೇಟಿ ನೀಡುವ ಮೂಲಕ ಸೆ.30ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅವರು ಕೋರಿದ್ದಾರೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: … More

ಕೃಷಿ ವಿದ್ಯಾರ್ಥಿಗಳಿಗೆ ಉಚಿತ ಅಡ್ವಾನ್ಸ್ಡ್ ಡ್ರೋನ್ ತರಬೇತಿ ನೀಡಲು ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ವಸತಿಯುತ ಅಡ್ವಾನ್ಸ್ಡ್ ಡ್ರೋನ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ ಕೃಷಿ ವಿಜ್ಞಾನ ವಿದ್ಯಾರ್ಥಿಗಳು, ಪದವೀಧರರು, ಮತ್ತು ಕೃಷಿ ವಿಜ್ಞಾನಿ ಅಭ್ಯರ್ಥಿಗಳಿಗೆ ಡ್ರೋನ್ ಉಪಕರಣವನ್ನು ವಿವಿಧ ಕ್ಷೇತ್ರಗಳಲ್ಲಿ ಉಪಯೋಗಿಸುವ ಸಂಬಂಧ ಉಚಿತವಾಗಿ ವಸತಿಯುತ ಅಡ್ವಾನ್ಸ್ಡ್ ಡ್ರೋನ್ ತರಬೇತಿ ನೀಡುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆ.31ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More

ಭೂಮಿ ಖರೀದಿಸಲು ಸರ್ಕಾರದಿಂದ ಸಹಾಯಧನ, ಅರ್ಜಿ ಆಹ್ವಾನ

ಪ್ರಸಕ್ತ ಸಾಲಿಗೆ “ಭೂ ಒಡೆತನ ಯೋಜನೆ”ಯಡಿ ಭೂ ರಹಿತ ಪ.ಪಂಗಡ ವರ್ಗದವರಿಗೆ ಭೂಮಿ ಖರೀದಿಸಲು ಸಹಾಯಧನ, ಸಾಲ ಸೌಲಭ್ಯ ನೀಡಲು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಂತ ಕೃಷಿ ಭೂಮಿಯನ್ನು ಹೊಂದುವುದು ಎಷ್ಟೋ ಬಡ ವರ್ಗದ ಜನರ ಕನಸಾಗಿರುತ್ತದೆ. ಅಂತಹ ಅಶಕ್ತ ಬಡವರ್ಗದ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಭೂಮಿ ಖರೀದಿಸಲು ಸಾಲ ಹಾಗೂ ಸಹಾಯಧನ ಸೌಲಭ್ಯವನ್ನು ನೀಡಲು ಸರ್ಕಾರ ಭೂ ಒಡೆತನ ಯೋಜನೆಯನ್ನು ಜಾರಿಗೆ … More

ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ, ಉದ್ಯಮಶೀಲತಾ ಅಭಿವೃದ್ಧಿ ಹಾಗೂ ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಪ್ರಾರಂಭಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 17 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More

ಗಂಗಾ ಕಲ್ಯಾಣ ಅರ್ಜಿ ಸಲ್ಲಿಕೆ ಪ್ರಾರಂಭ: Ganga Kalyana Yojana Online Application 2025-26

Ganga Kalyana Scheme Online Apply Application 2025-26: ಪ್ರಸಕ್ತ ಸಾಲಿಗೆ ವಿವಿಧ ನಿಗಮಗಳಿಂದ “ಗಂಗಾ ಕಲ್ಯಾಣ ನೀರಾವರಿ ಯೋಜನೆ” (Ganga Kalyana Yojane)ಯ ಸಹಾಯಧನದ ಜೊತೆಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಗಂಗಾ ಕಲ್ಯಾಣ ಯೋಜನೆ 2025 (Ganga Kalyana Scheme Online Application 2025): ಈ ಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಕೃಷಿ ಜಮೀನಿನಲ್ಲಿ ಕೊಳವೆಬಾವಿ ಕೊರೆದು, ಪಂಪಸೆಟ್ ಸರಬರಾಜು ಮಾಡಿ, ಅಳವಡಿಸಿ ವಿದ್ಯುದ್ದೀಕರಣಗೊಳಿಸಿ, ನೀರಾವರಿ ಸೌಲಭ್ಯ … More

ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ – ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಗಳಡಿ ಸಾಲ ಸೌಲಭ್ಯಗಳನ್ನು ಪಡೆಯಲು ಪ.ಜಾತಿಯ ಅರ್ಹ ಪಲಾನುಭವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್https://sevasindhu.karnataka.gov.in/Sevasindhu/Kannada?ReturnUrl=%2F ಗೆ ಭೇಟಿ ನೀಡಿ. ಆನ್ … More

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಸರ್ಕಾರದಿಂದ ಆರ್ಥಿಕ ನೆರವು – ಅರ್ಜಿ ಆಹ್ವಾನ

ಪ್ರಸಕ್ತ ಸಾಲಿಗೆ ನೇಕಾರ್ ಸಮ್ಮಾನ್ ಯೋಜನೆ(Nekar Samman Scheme)ಯಡಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಸಂಭಂದಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ಆರ್ಥಿಕ ನೆರವು ನೀಡಲು ಮೈಸೂರು ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಹಾಗೂ ಇತರೆ ಕೈಮಗ್ಗ ಚಟುವಟಿಕೆಗಳನ್ನು ನಡೆಸುವ (ಕೈಮಗ್ಗ ನೇಕಾರರು, ವಿದ್ಯುತ್ ಮಗ್ಗ, ಮಗ್ಗ … More

Good News: ಶಾಲಾ ಮಕ್ಕಳಿಗೆ ವಾರದ ಆರು ದಿನವೂ ಮೊಟ್ಟೆ, ಬಾಳೆಹಣ್ಣು ವಿತರಣೆ

ವಾರದಲ್ಲಿ ಆರು ದಿನವೂ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣನ್ನು ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಪ್ರಸ್ತುತ ಯೋಜನೆಯನ್ನು 2025-26ನೇ ಸಾಲಿನಲ್ಲಿ ಮುಂದುವರಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಆದೇಶವನ್ನು … More